ನಿರ್ಜನ ಜಾಗದಲಿ, ಕರಾಳ ರಾತ್ರಿಯಲಿ
ಹೊಂಗೆಯ ಮರದಡಿ ಕೂತಳು ಕಮಲಿ..
ಸೂಜಿಯಂತೆ ಚುಚ್ಚುತ್ತಿದ್ದ ಬಿರುಸು ಗಾಳಿ,
ಚರ್ಮವ ಸುಲಿಯುವ ಹಾಗೆ ಮಾಡಿದೆ ಧಾಳಿ..
ಸಂಕಟ, ಅವಮಾನ, ವಿಕಾರ ನೆನಪುಗಳ ಸವಾರಿ
ದುಃಖ, ಸಂಕಟ, ದುಮ್ಮಾನ ಒತ್ತರಿಸಿ ಬಂತು ಹುಹಾರಿ..
ಬತ್ತಿದೆ ಕಂಬನಿ, ಮುರಿದಿದೆ ಕನಸು,
ಮಣಿಯದು, ದಣಿಯದು, ಕಲ್ಲಾಗಿದೆ ಮನಸು..
ಯಾರಿಗಾಗೋ ಈ ಜೀವನ, ಏತಕ್ಕಾಗಿ ಬದುಕಿರುವೆ ನಾ?
ಉತ್ತರಿಸೆಲೇ ಚಂದಾಮಾಮ, ನಿರೀಕ್ಷಿಸಿದೆ ಈ ನಯನ..
ಅವ ಮೋರೆ ನೋಡಲೂ ಬರಲಿಲ್ಲ..
ಗೊತ್ತು.. ನಾ ಯಾರಿಗೂ ಬೇಕಿಲ್ಲ..
ಸಾಕಷ್ಟು ಸವೆದಿದೆ ಪಯಣ..
ತಲುಪಿದೆ ಕೊನೆಯ ನಿಲ್ದಾಣ: ಮಸಣ!